Site icon Suddi Belthangady

ಶ್ರೀ ರಾಮ ಕ್ಷೇತ್ರದಲ್ಲಿ ಹನುಮಾನ್ ರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.16ರಂದು ಬೆಳಿಗ್ಗೆ ದತ್ತಯಾಗ, ಮಧ್ಯಾಹ್ನ ಆಂಜನೇಯ ದೇವರಿಗೆ ಮತ್ತು ದತ್ತಾತ್ರೇಯ ಗುರುಗಳಿಗೆ ವಿಶೇಷ ಪೂಜೆ, ಸಂಜೆ ವಿವಿಧ ವೈದಿಕ ಕಾರ್ಯಕ್ರಮಗಳು, ರಾತ್ರಿ ದತ್ತಾತ್ರೇಯ ಮೂರ್ತಿ ಮತ್ತು ಆಂಜನೇಯ ದೇವರ ಮೂರ್ತಿ ಬಲಿಮೂರ್ತಿ ಉತ್ಸವ ನಂತರ ಶ್ರೀ ಹನುಮಾನ್ ರಥೋತ್ಸವ ನಡೆಯಿತು.

ಇಂದು ಎ.17ರಂದು ರಾಮನವವಿ ಬೆಳಿಗ್ಗೆ ಸಹಸ್ರ ನಾಮ ಹೋಮ, ಶ್ರೀ ರಾಮ ತಾರಕ ಮಂತ್ರ ಯಜ್ಞ ಮಂಗಳಂ, ಮದ್ಯಾಹ್ನ ಹಗಲು ಉತ್ಸವ ರಾತ್ರಿ ಶ್ರೀ ಬಲಿ, ಭೂತ ಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಕ್ಷೇತ್ರದ ರಕ್ತಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಂತರ ಮಹಾ ಬ್ರಹ್ಮ ರಥೋತ್ಸವ ನಡೆಯಲಿದೆ.

Exit mobile version