ಕೊಕ್ರಾಡಿ: ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

0

ಕೊಕ್ರಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯದ ಕೋಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೀಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ ಬಲ್ಲೋಲಿಗುತ್ತು, ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ ಪಾರ್ಶ್ವನಾಥ ಬಂಗ ಸಾಲ್ಯಾರ ಗುತ್ತು , ಪ್ರಧಾನ ಕಾರ್ಯದರ್ಶಿ ಸುಂದರ ಪೂಜಾರಿ ಕೊಳ್ಳೋಟ್ಟು ಗುತ್ತು, ಕೋಶಾಧಿಕಾರಿಗಳಾದ ಪ್ರಕಾಶ್ ಕುಮಾರ್ ಜೈನ್ ಹೊಸಮನೆ ಗುತ್ತು, ಜೊತೆ ಕಾರ್ಯದರ್ಶಿಗಳಾದ ರವಿ ಪೂಜಾರಿ, ಸದಸ್ಯರಾದ ಜಿನೇಶ್ಚಂದ್ರ ಬಲ್ಲಾಳ್ ಮೂಡುಬೈಲು ಗುತ್ತು, ರಾಜು ಶೆಟ್ಟಿ, ಮಂಜಪ್ಪ ಪೂಜಾರಿ, ಒಕ್ಕೂಟದ ಅಧ್ಯಕ್ಷ ರಾದ ಬಾಲಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷ ಕಿಟ್ಟಣ್ಣ ಆಚಾರ್ಯ, ಕೊಕ್ರಡಿ ಸಾವ್ಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಶಶಿದರ್ ಕುಲಾಲ್ ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here