ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಭೇಟಿ

0

ಬೆಳ್ತಂಗಡಿ: ಸಚಿವ ದಿನೇಶ್ ಗುಂಡೂರಾವ್ ಬೆಳ್ತಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಏ.19ರಂದು ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದರು.

ಇನ್ನೂ ಅವರು ಮಾತನಾಡಿ ಬೆಳ್ತಂಗಡಿಯಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಪ್ರಚಾರ ಮಾಡುತ್ತಿದ್ದಾರೆ.ಹತ್ತು ವರ್ಷದಿಂದ ಬಿಜೆಪಿ ಸರ್ಕಾರ ಇದೆ ಆದರೆ ಯಾವುದೇ ರೀತಿಯಲ್ಲಿ ಜನರಿಗೆ ಅನುಕೂಲವಾಗಿಲ್ಲ, ಕಾಂಗ್ರೆಸ್ ಎಲ್ಲಾ ಕಡೆ ಗೆಲ್ಲುತ್ತಾದೆ.ನಮ್ಮ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ,ಮಾಜಿ ಶಾಸಕ ಜೆ.ಎಮ್ ಲೋಬೋ, ಕೆ.ಕೆ ಶಾಹುಲ್ ಹಮೀದ್, ಬೆಳ್ತಂಗಡಿ ಅಲ್ಪಸಂಖ್ಯಾತರ ಅಧ್ಯಕ್ಷ ಕರೀಂ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ, ವಿಧಾನ ಸಭಾ ಉಸ್ತುವಾರಿ ಹಾಗೂ ಪ್ರಚಾರ ಸಮಿತಿಯ ಅಧ್ಯಕ್ಷರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೇಡಿ, ಸುದರ್ಶನ್ ಶೆಟ್ಟಿ, ಜಗದೀಶ್, ತಾಲೂಕು ಮಹಿಳಾ ಅಧ್ಯಕ್ಷೆ ನಮೀತಾ, ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕುಮಾರ್ ಸ್ವಾಗತಿಸಿ, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ದನ್ಯವಾದವಿತ್ತರು.

LEAVE A REPLY

Please enter your comment!
Please enter your name here