ನಾರಾವಿ: ಮತದಾನ ಜಾಗೃತಿ ಬೀದಿ ನಾಟಕ

0

ನಾರಾವಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಶ್ರೀ ಧ.ಮ. ಕಾಲೇಜು ಉಜಿರೆ ರಾ. ಸೇ. ಯೋಜನೆ ಮತ್ತು ನಾರಾವಿ ಗ್ರಾ. ಪಂ. ಇವುಗಳ ಜಂಟಿ ಆಶ್ರಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ -1 ರ ವ್ಯಾಪ್ತಿಯ ನಾರಾವಿ ಬಸ್ಸು ನಿಲ್ದಾಣದಲ್ಲಿ ಮತದಾನ ಜಾಗೃತಿ ಬಗ್ಗೆ ಬೀದಿ ನಾಟಕ ಪ್ರದರ್ಶನ ಮಾಡಿ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷರು ವೈಜಣ್ಣ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ , ತಾ.ಪಂ.ಅಧೀಕ್ಷಕ ಡಿ. ಪ್ರಶಾಂತ್ TLMT ದಿವ್ಯಾ ಕುಮಾರಿ, ಗ್ರಾಮ ಪಂಚಾಯತ್ ಪಿ ಡಿ ಒ ಸುಧಾಕರ್, ಉಜಿರೆ ಎಸ್ ಡಿ ಎಂ ಪದವಿ ಕಾಲೇಜಿನ ಎನ್ ಎಸ್ ಎಸ್ ನೋಡಲ್ ಅಧಿಕಾರಿ ದೀಪ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here