ಎ.29: ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

0

ಉಜಿರೆ: ಉಜಿರೆ ಓಡಲ ಚಾಮುಂಡಿ ನಗರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನಲ್ಲಿ ಬ್ರಹ್ಮಶ್ರೀ ಉಚ್ಚೆಲತ್ತಾಯ ನೀಲೇಶ್ವರ ಪದ್ಮನಾಭಾ ತಂತ್ರಿಗಳ ಮಾರ್ಗದರ್ಶನದಲ್ಲಿ ವೇದಮೂರ್ತಿ ಪಿ.ರಾಜಗೋಪಾಲ ಯಡಪಡಿತ್ತಾಯ ಇವರ ನೇತೃತ್ವದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಎ.29ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಬೆಳಿಗ್ಗೆ ಪಂಚಗವ್ಯ, ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ, ಕಲಶಾಭಿಷೇಕ, ಚಂಡಿಕಾ ಯಾಗ, ಮಧ್ಯಾಹ್ನ ಪರ್ವ, ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ. ಸಂಜೆ ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನೆ, ರಾತ್ರಿ 7.30ಕ್ಕೆ ಮಹಾ ಪೂಜೆ, ಪ್ರಸಾದ ವಿತರಣೆ, ಬಳಿಕ ಭಂಡಾರ ತೆಗೆದು ದೈವಕ್ಕೆ ಎಣ್ಣೆ ಬೂಳ್ಯ, ರಾತ್ರಿ 8.30ರಿಂದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿದ್ಯ ರಾತ್ರಿ 10 ರಿಂದ ಶ್ರೀ ವ್ಯಾಘ್ರಚಾಮುಂಡಿ ನೇಮೋತ್ಸವ ನಡೆಯಲಿದೆ ಎಂದು ಶ್ರೀ ವ್ಯಾಘ್ರ ಚಾಮುಂಡಿ ಸೇವಾ ಟ್ರಸ್ಟ್ ಅಧ್ಯಕ್ಷ ಸೀತಾರಾಮ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here