Site icon Suddi Belthangady

ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಮೂಲಕ ಪದ್ಮರಾಜ್ ಆರ್. ಪೂಜಾರಿ ಮತಯಾಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನವಾಣೆಯ ಕಾವು ದಿನದಿಂದ ದಿನಕ್ಕೆ ರಂಗೆರುತ್ತಿದೆ.

ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಎ.22ರಂದು ಬೆಳ್ತಂಗಡಿ ಬಸ್ ನಿಲ್ದಾಣದಿಂದ ಸಂತೆಕಟ್ಟೆ ಅಯ್ಯಪ್ಪ ಗುಡಿ ತನಕ ಕಾಲ್ನಡಿಗೆ ಮೂಲಕ ಮತಯಾಚನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿಯ ಬಸ್‌ನಿಲ್ದಾಣ ಹೋಟೆಲ್, ಅಗಂಡಿ-ಮಳಿಗೆಗಳಿಗೆ ತೆರಲಿ ಮತಯಾಚನೆ ಮಾಡಿದರು.

ಬಳಿಕ ಮಧ್ಯಾಹ್ನ 1 ಗಂಟೆಗೆ ಮಡಂತ್ಯಾರು ಪೇಟೆ ಹಾಗೂ 2 ಗಂಟೆಗೆ ಪುಂಜಾಲಕಟ್ಟೆಯಲ್ಲಿ ಮತಯಾಚನೆ ನಡೆಸಲಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್, ಸಹಿತ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version