ವೇಣೂರು: ಪಚ್ಚೇರಿ ಬಳಿ ಚಿರತೆ ಹಾವಳಿ- ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

0

ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ.

ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಕೃಷ್ಣಾನಂದ ಭಟ್ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here