ಮುಂಡೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ಮುಂಡೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಎ.22ರಂದು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಹವಾಚನ, ಗಣಪತಿ ಹೋಮ, ಕಲಶಾಭಿಷೇಕ, ಚಂಡಿಕಾ ಹೋಮ, ನಂತರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ಬಳಿಕ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಹಾಪೂಜೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ ಶ್ರೀ ಶಾರದಾಂಬ ಭಜನಾ ಮಂಡಳಿ ಮುಂಡೂರು ಹಾಗೂ ಶ್ರೀ ನಾಗಾಂಬಿಕ ಭಜನಾ ಮಂಡಳಿ, ಶ್ರೀಕ್ಷೇತ್ರ ಮಂಗಳಗಿರಿ, ಮುಂಡೂರು ಇವರಿಂದ ಕುಣಿತ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಬಳಿಕ ಸ್ಥಳೀಯ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ನೃತ್ಯ ವೈಭವ, ಮುಂಡೂರು ಜ್ಯೋತಿ ಯುವತಿ ಮಂಡಲದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ, ಪ್ರಧಾನ ಅರ್ಚಕರು ಸತ್ಯನಾರಾಯಣ ಪೂಜಾ ಸಮಿತಿ, ಜೀರ್ಣೋದ್ದಾರ, ಅಭಿವೃದ್ಧಿ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು, ಗೌರವ ಸಲಹೆಗಾರರು, ಯುವ ಸಂಚಲನಾ ಸಮಿತಿ, ಮಹಿಳಾ ಸಂಚಾಲನಸಮಿತಿ, ಶ್ರೀ ಶಾರದಾಂಭ ಭಜನಾ ಮಂಡಳಿ, ಭಕ್ತ ವೃಂದ, ಗ್ರಾಮದ ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here