ಲಾಯಿಲ ಸ.ಹಿ.ಪ್ರಾ ಶಾಲಾ ಅಭಿವೃದ್ದಿ ಕಾಮಗಾರಿಗೆ ಚಾಲನೆ

0

ಲಾಯಿಲ: ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ರೋಟರಿ ಕ್ಲಬ್ ಬೆಳ್ತಂಗಡಿ, ಬದುಕಟ್ಟೋಣ ಸೇವಾ ಟ್ರಸ್ಟ್ ಉಜಿರೆ, ಹಳೆ ವಿದ್ಯಾರ್ಥಿ ಸಂಘ ದ.ಕ ಜಿ ಪ ಹಿ ಪ್ರಾ ಶಾಲೆ ಕರ್ನೋಡಿ, ಪತ್ರಕರ್ತರ ಸಂಘ ರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬದುಕು ಕಟ್ಟೋಣ ತಂಡದ ಸೇವಾ ಸಂಕಲ್ಪ ಅಕ್ಷರ ದೇಗುಲಕ್ಕೆ ಅಕ್ಕರೆಯ ಸೇವೆ ಎಂಬಂತೆ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕರ್ನೋಡಿ ಲಾಯಿಲ ಇದರ ಅಭಿವೃದ್ಧಿ ಕಾಮಗಾರಿಗೆ ಹಿರಿಯ ವಕೀಲ ಬಿ. ಕೆ. ಧನಂಜಯ ರಾವ್ ಎ.28ರಂದು ಚಾಲನೆ ನೀಡಿ ಶುಭ ಹಾರೈದರು.

ಬೆಳ್ತಂಗಡಿ ರೋಟರಿ ಕ್ಲಬ್ ನ ಅದ್ಯಕ್ಷ ಅನಂತ್ ಭಟ್ ಮಚ್ಚಿಮಲೆ ಮಟಮಾಡಿದರು.ಬದುಕುಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ನಿಯೋಜಿತ ಅದ್ಯಕ್ಷ ಪೂರಣ್ ವರ್ಮ, ಹಳೆವಿದ್ಯಾರ್ಥಿ ಸಂಘದ ಸ್ಥಾಪಕ ಅದ್ಯಕ್ಷ ಸಂತೋಷ್ ಕುಮಾರ್, ಅದ್ಯಕ್ಷ ಸುರೇಶ್ ಶೆಟ್ಟಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅದ್ಯಕ್ಷ ಚೈತ್ರೇಶ್ ಇಳಂತಿಲ, ಮಾಜಿ ಸೈನಿಕರ ಸಂಘದ ಅದ್ಯಕ್ಷ ಸುನಿಲ್ ಶೆಣೈ, ಉದ್ಯಮಿ ಅಬ್ದುಲ್ ಕರಿಂ, ಮುಖ್ಯೋಪಾಧ್ಯಾಯ ಜಗನ್ನಾಥ್ ಎಂ, ಶಾಲಾಭಿವೃದ್ಧಿ ಸಮಿತಿ ಅದ್ಯಕ್ಷೆ ಸೌಮ್ಯ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವಿದ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಗೌರವಿಸಲಾಯಿತು. ಸಹಶಿಕ್ಷಕ ಕೃಷ್ಣಪ್ರಸಾದ್ ಸ್ವಾಗತಿಸಿ, ರುಕ್ಮಯ ಕನ್ನಾಜೆ ಕಾರ್ಯಕ್ರಮ ನಿರೂಪಿಸಿದರು.ಗಣೇಶ್ ವಂದಿಸಿದರು.

LEAVE A REPLY

Please enter your comment!
Please enter your name here