ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಚಂಡಿಕಾ ಹೋಮ, ಮಹಾ ಪೂಜೆ

0

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.27 ಮತ್ತು ಎ.28 ರಂದು ಇಂದಬೆಟ್ಟು-ಕುತ್ತೊಟ್ಟು ಅಸ್ರಣ್ಣರಾದ ಎಸ್. ಗೋಪಾಲಕೃಷ್ಣ ಉಪಾಧ್ಯಾಯ ರವರ ನೇತೃತ್ವದಲ್ಲಿ ಹಾಗೂ ವೇ.ಮೂ. ಶ್ರೀಕಾಂತ ಭಟ್ ರವರ ಪೌರೋಹಿತ್ಯದಲ್ಲಿ ಜರಗಿತು.

ಎ.27 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ, 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ, ನಾಗ ಸಾನಿಧ್ಯದಲ್ಲಿ ತಂಬಿಲ, ಅಶ್ವಥ ಪೂಜೆ, ನವಕ ಪ್ರಧಾನ ಹೋಮ ಹಾಗೂ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಆಶ್ಲೇಷಾ ಬಲಿ, ನಿತ್ಯ ಪೂಜೆ. ನಡೆಯಿತು.

ಎ.28ರಂದು ಚಂಡಿಕಾ ಹೋಮ, ಮಹಾ ಪೂಜೆ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸಾನಿಧ್ಯದಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಲಾಯಿಲ ಶ್ರೀ ಬಲಮುರಿ ಗಣಪತಿ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ, ಶ್ರೀ ರಂಗ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮೈಸಂದಾಯ, ಲೆಕ್ಕೆಸಿರಿ, ಜುಮಾದಿ ಬಂಟ ಹಾಗೂ ಅಣ್ಣಪ್ಪ ಪಂಜುರ್ಲಿ ದೈವಗಳಿಗೆ ನೇಮೋತ್ಸವ ನಡೆಯಲಿದೆ.

LEAVE A REPLY

Please enter your comment!
Please enter your name here