ಬೆಳ್ತಂಗಡಿ ಜೆಸಿಐ ಮಂಜುಶ್ರೀಯಲ್ಲಿ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್” ಕಾರ್ಯಕ್ರಮ

0

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್”ನ ವಿಭಾಗದಲ್ಲಿ ಬಳಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಧರ್ಣಮ್ಮ ಮತ್ತು ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಕೇಶವತಿ ಡಿ. ಇವರನ್ನು ಎ.23ರಂದು ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುತಿಸಿ ಸನ್ಮಾನಿಸಲಾಯಿತು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ರಂಜಿತ್ ಎಚ್.ಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು.

ಬೆಳ್ತಂಗಡಿ ತಾಲೂಕು ಚುನಾವಣಾಧಿಕಾರಿ ಹಾಗೂ ತಾ.ಪಂ.ಕಾರ್ಯನಿರ್ವಾಹನಾಧಿಕಾರಿ ವೈಜಣ್ಣ ತಾ.ಪಂ.ವ್ಯವಸ್ಥಾಪಕ ಪ್ರಶಾಂತ್ ಡಿ, ಬೆಳಾಲು ಮಾಯಾ ಹಿರಿಯ ಪ್ರಾಥಮಿಕ ಶಾಲೆ ಬೆಳಾಲಿನ ಶಿಕ್ಷಕ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯ ತರಬೇತುದಾರ ಯೋಗೇಶ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ವಲಯ ಉಪಾಧ್ಯಕ್ಷ ಶಂಕರ್ ರಾವ್ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಅಧಿಕಾರಿ ಮಂಜು, SKDRDP ಯೋಜನಾಧಿಕಾರಿ ಜಯಾನಂದ ಬಳಂಜ, ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಪ್ರಶಾಂತ್ ಲಾಯಿಲ, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಶೈಲೇಶ್, ಸದಸ್ಯರಾದ ರಜತ್, ಜೆಜೆಸಿ ತ್ರಿಷಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷ ಸುಧೀರ್ ಕೆ.ನ್. ಹಾಗೂ ಜೆಸಿ ವಾಣಿಯನ್ನು ಜೆಜೆಸಿ ಸದಸ್ಯರಾದ ದೀಪ್ತಿ, ಸನ್ಮಾನ ಪತ್ರವನ್ನು ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ಮತ್ತು ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್ ಇವರು ವಾಚಿಸಿದರು. ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here