ನಿಡ್ಲೆ: ಅಗ್ರಿಲೀಫ್ ಸಂಸ್ಥೆಗೆ ಉಡುಪಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

0

ನಿಡ್ಲೆ: ಉಡುಪಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ನಿಡ್ಲೆಯ ಪ್ರತಿಷ್ಟಿತ ಸಂಸ್ಥೆಯಾದ ಅಗ್ರಿಲೀಫ್ ಸಂಸ್ಥೆಗೆ ಎ.30ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಉತ್ಪನ್ನಗಳನ್ನು ಪರಿಶೀಲಿಸಿ, ಉತ್ಪನ್ನದ ಗುಣಮಟ್ಟ ಮತ್ತು ದೇಶವಿದೇಶಗಳಲ್ಲಿ ಸಂಸ್ಥೆಯ ಬೆಳವಣಿಗೆಯನ್ನು ಶ್ಲಾಘಿಸಿದರು.

ನಿರ್ದೇಶಕರಾದ ಅವಿನಾಶ್ ರಾವ್ ಸಂಸ್ಥೆಯ ಸಾಧನೆ ಮತ್ತು ಮುಂದಿನ ಗುರಿಗಳನ್ನು ಸ್ವಾಮೀಜಿಯವರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹ ನಿರ್ದೇಶಕರಾದ ಅತಿಶಯ್ ಜೈನ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಸ್ವಾಮೀಜಿಯವರ ಆಶಿರ್ವಾದ ಪಡೆದರು.

LEAVE A REPLY

Please enter your comment!
Please enter your name here