ಲಾಯಿಲ ಪಡ್ಲಾಡಿ ಸ.ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್ ನಿವೃತ್ತಿ

0

ಲಾಯಿಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ವಯೋ ನಿವೃತ್ತರಾದರು.

ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿಯ ಪುತ್ರಿ.

ಬಡನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ , ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾರ್ಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಟ್ ಗೈಡಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ ಇಲ್ಲಿ ಸೇವೆ ಸಲ್ಲಿಸಿದ್ದು ಇಲ್ಲಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ.

1984-85ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

LEAVE A REPLY

Please enter your comment!
Please enter your name here