ನಾರಾವಿ: ಯುವ ಸಮುದಾಯದ ಯುವ ಮನಸ್ಸುಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಒಂದುಗೂಡಿಸುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಶ್ರಮದ ಅನುಭವ ನೀಡುತ್ತದೆ ಎಂದು ಶಿರ್ತಾಡಿಯ ಮಕ್ಕಿ ಜವಾಹರಲಾಲ್ ನೆಹರು ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಟಿ.ಕೆ.ವೆಂಕಟ ರಾವ್ ಹೇಳಿದರು.
ಶಿರ್ತಾಡಿಯ ಮಕ್ಕಿ ಜವಾಹರಲಾಲ್ ನೆಹರು ಪ್ರೌಢಶಾಲೆಯಲ್ಲಿ ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಂತ ಅಂತೋನಿ ಪದವಿ ಕಾಲೇಜಿನ ಉಪಪ್ರಾಂಶುಪಾಲ ಸಂತೋಷ್ ಸಲ್ಡಾನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಬಿಸಿಲನ್ನು ಲೆಕ್ಕಿಸದೆ ಮಾಡಿದ ಕೆಲಸವನ್ನು ಶ್ಲಾಘಿಸಿದರು.
ಜವಾಹರಲಾಲ್ ನೆಹರು ಪ್ರೌಢಶಾಲೆಯ ಮುಖ್ಯಶಿಕ್ಷಕ ಜಯರಾಮ್ ಎಂ., ಶ್ರೀಕಾಂತ್ ಭಟ್, ಎಸ್.ಡಿ.ಎಂ.ಸಿ ಅಧ್ಯಕ್ಷ ಮುಕೇಶ್, ಉಪಾಧ್ಯಕ್ಷೆ ಸುಮಲತಾ, ಮುಖ್ಯಶಿಕ್ಷಕಿ ಬೇಬಿ, ಸಹಶಿಕ್ಷಕ ಗಣರಾಜ್, ಎನ್ನೆಸ್ಸೆ ಕಾರ್ಯದರ್ಶಿಗಳಾದ ವಿಘ್ನೇಶ್ ಆಚಾರ್ಯ, ಅನ್ವಿತಾ ರಾವ್ ಹಾಗೂ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಕೇಶವ್ ಶರ್ಮಾ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿನೇಶ್ ಬಿ.ಕೆ. ಬಳಂಜ ಶಿಬಿರಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಅವಿನಾಶ್ ಲೋಬೊ ಸ್ವಾಗತಿಸಿದರು. ಎನ್ಎಸ್ಎಸ್ ಸ್ವಯಂಸೇವಕಿ ದಿವಿತಾ ವಂದಿಸಿದರು. ಉಪನ್ಯಾಸಕ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.