ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.

ತನ್ನ 14ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ.

ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಡಾ.ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here