ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಶರತ್ ಕುಮಾರ್ ಟಿ ಕೆ ರಿಗೆ ಬೀಳ್ಕೊಡುಗೆ

0

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಪ್ರಾಧ್ಯಾಪಕ ಡಾ.ಶರತ್ ಕುಮಾರ್ ಟಿ ಕೆ ಇವರು ಏಪ್ರಿಲ್ 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದರು.

ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ ಎಲ್ಲಾ ಅಧ್ಯಾಪಕ- ಅಧ್ಯಾಪಕೇತರ ವೃಂದದವರು ಶರತ್ ಕುಮಾರ್ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ, ತದನಂತರ ಸರ್ಕಾರಿ ಸೇವೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸದುರ್ಗದಲ್ಲಿ ನೇಮಕಗೊಂಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಬೆಳ್ತಂಗಡಿಯಲ್ಲಿ ಸುಮಾರು 37 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿಯನ್ನು ಹೊಂದಿದ್ದಾರೆ.

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಪ್ರಾಂಶುಪಾಲರಾಗಿ ಕಾಲೇಜು ನ್ಯಾಕ್ ನಲ್ಲಿ ಉತ್ತಮ ಶ್ರೇಣಿ ಪಡೆಯಲು ಕಾರಣಿಭೂತರಾಗಿದ್ದಾರೆ.

LEAVE A REPLY

Please enter your comment!
Please enter your name here