ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

0

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು. ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು.

ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here