ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

0

ಬೆಳ್ತಂಗಡಿ: ನಡ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಗೋಪಿಯವರು ಅನಾರೋಗ್ಯದಿಂದ ಬಳಲುತಿದ್ದು, ನಡೆದಾಡಲು ಕಷ್ಟ ಪಡುತಿರುದನ್ನು ಗಮನಿಸಿ ಅವರಿಗೆ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರ ಮಾರ್ಗದರ್ಶನದಲ್ಲಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಅಬ್ದುಲ್ ರಝಕ್, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರು ಅಜಿತ್ ಆರಿಗ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ತನಿಯಪ್ಪ ಗೌಡ, ಮೇಲ್ವಿಚಾರಕ ಸುಶಾಂತ್, ಆಶಾ ಕಾರ್ಯಕರ್ತೆ ಉಷಾ ಕಿರಣ್, ಸೇವಾಪ್ರತಿನಿಧಿ ಶಕುಂತಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here