ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಅಂತಿಮ ವಿದಾಯ- ಸಾವಿರಾರು ಮಂದಿ ಭಾಗಿ

0

ಬೆಳ್ತಂಗಡಿ: ಮೇ 8ರಂದು ನಿಧನರಾಗಿರುವ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ(79ವ)ರವರ ಮೃತದೇಹದ ಅಂತ್ಯ ಸಂಸ್ಕಾರ ಮೇ 9ರಂದು ಸಂಜೆ 4 ಗಂಟೆ ವೇಳೆಗೆ ಕುವೆಟ್ಟು ಗ್ರಾಮದ ಕೇದೆಯಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನ ಪ್ರಭಾವಿ ಮತ್ತು ಧೀಮಂತ ನಾಯಕರಾಗಿ ಗುರುತಿಸಿಕೊಂಡಿದ್ದ ಹಾಗೂ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದ ವಸಂತ ಬಂಗೇರ ಅವರ ಪಾರ್ಥೀವ ಶರೀರವನ್ನು ಮೇ 9ರಂದು ಮುಂಜಾನೆ 3 ಗಂಟೆ ವೇಳೆಗೆ ಚಾರ್ಮಾಡಿಯ ಮೂಲಕ ಬೆಳ್ತಂಗಡಿಗೆ ತರಲಾಗಿದ್ದು ಹಳೆಕೋಟೆಯಲ್ಲಿರುವ ಅವರ ಸುಪ್ರಭಾತ ನಿವಾಸಕ್ಕೆ ತಂದು ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ನಂತರ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬಳಿಕ ತಾಲೂಕು ಕ್ರೀಡಾಂಗಣದಿಂದ ಬಸ್ ನಿಲ್ದಾಣದ ಬಳಿಗೆ ಅಂತಿಮ ಯಾತ್ರೆ ಮೂಲಕ ವಸಂತ ಬಂಗೇರ ಅವರ ಪಾರ್ಥಿವ ಶರೀರವನ್ನು ತಂದು ಪಾದಯಾತ್ರೆ ಮೂಲಕ ಕುವೆಟ್ಟು ಕೇದೆಗೆ ಕೊಂಡೊಯೊಯ್ಯಲಾಯಿತು. ಬ್ಯಾಂಡ್, ಸುಡುಮದ್ದಿನೊಂದಿಗೆ ಪಾದಯಾತ್ರೆ ನಡೆಸಲಾಯಿತು.

ಈ ಮಧ್ಯೆ ತಾಲೂಕು ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ನೇತೃತ್ವದಲ್ಲಿ ಸರಕಾರಿ ಗೌರವ ಸಲ್ಲಿಸಲಾಯಿತು.

ಸೋಲೂರು ಮಠಾಧೀಶ ವಿಖ್ಯಾತನಂದ ಸ್ವಾಮೀಜಿ ಬಲ್ಯೊಟ್ಟು, ಬಿಷಪ್ ಲಾರೆನ್ಸ್ ಮುಕ್ಕುಯಿ, ಆರ್‌ಎಸ್‌ಎಸ್ ಹಿರಿಯ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಕೋಟ ಶ್ರೀನಿವಾಸ ಪೂಜಾರಿ, ವಿನಯ ಕುಮಾರ್ ಸೊರಕೆ, ಕೃಷ್ಣ ಪಾಲೇಮಾರ್, ಗಂಗಾಧರ ಗೌಡ, ಶಾಸಕರಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್, ಮಾಜಿ ಶಾಸಕರಾದ ಶಕುಂತಳಾ ಟಿ. ಶೆಟ್ಟಿ, ಸಂಜೀವ ಮಠಂದೂರು, ರುಕ್ಮಯ ಪೂಜಾರಿ, ಜೆ.ಆರ್.ಲೋಬೋ, ಐವನ್ ಡಿ ಸೋಜಾ, ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ. ಶಿವಾನಂದ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ, ನಾಗರಿಕ ಸೇವಾ ಟ್ರಸ್ಟ್ ಸಂಚಾಲಕ ಸೋಮನಾಥ ನಾಯಕ್, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗುರುದೇವ ವಿವಿಧೋzಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನನಾಭ ಮಾಣಿಂಜ, ಸಿಬ್ಬಂದಿ ವರ್ಗದವರು, ರಬ್ಬರ್ ಬೆಳೆಗಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಬಿಡೆ, ವಿಜಯ ಕ್ರೆಡಿಟ್ ಕೋ ಅಪರೇಟಿವ್ ಅಧ್ಯಕ್ಷ ಜಯರಾಮ ಶೆಟ್ಟಿ ಎಸ್, ಬಿಲ್ಲವ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಪ್ರಸಾದ್ ಎಂ.ಕೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಗೌಡರ ಯಾನೆ ಒಕ್ಕಲಿಗರ ಗೌಡರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಎಚ್. ಪದ್ಮ ಗೌಡ, ಶ್ರೀ ಕಾಲಭೈರವೇಶ್ವರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಜಯಂತ ಕೋಟ್ಯಾನ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಯುವಮೋರ್ಚಾದ ಮಾಜಿ ಅಧ್ಯಕ್ಷ ಸಂಪತ್ ಬಿ ಸುವರ್ಣ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ನಾಗೇಶ್ ಕುಮಾರ್, ಜಿ.ಪಂ. ಮಾಜಿ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ, ಧರಣೇಂದ್ರ ಕುಮಾರ್, ಮಾಜಿ ಸದಸ್ಯ ಶೇಖರ ಕುಕ್ಕೇಡಿ, ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಹಿರಿಯ ವಕೀಲ ಬಿ.ಕೆ. ಧನಂಜಯ ರಾವ್, ಯೋಗೀಶ್ ನಡಕ್ಕರ, ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಾಧವ ಗೌಡ ಜಾಕೆ ಸಹಿತ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.

ಪತ್ರಕರ್ತರ ಸಂಘ, ವಕೀಲರ ಸಂಘ ಸಹಿತ ವಿವಿಧ ಸಂಘ ಸಂಸ್ಥೆಗಳು ಮತ್ತು ಗುರುದೇವ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಮತ್ತು ಗುರುದೇವ ಕಾಲೇಜು ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು. ವಸಂತ ಬಂಗೇರ ಅವರ ಸಹೋದರ, ಮಾಜಿ ಶಾಸಕ ಪ್ರಭಾಕರ ಬಂಗೇರ, ರಮೇಶ್ ಬಂಗೇರ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ಸುದ್ದಿ ಯೂ ಟ್ಯೂಬ್ ಬೇರ ಚಾನೆಲ್‌ನಲ್ಲಿ ಬೆಳಿಗ್ಗೆಯಿಂದಲೇ ನೇರಪ್ರಸಾರ ಮಾಡಲಾಗುತ್ತಿದ್ದು ಸಾವಿರಾರು ಮಂದಿ ವೀಕ್ಷಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here