ಮೇ 26: ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ 

0

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ.ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಮೇ 26ರಂದು ಭಾನುವಾರ ಬೆಳಿಗ್ಗೆ 9.30ರಿಂದ ಮದ್ಯಾಹ್ನ 1ರವರೆಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದ್ದು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಪೂರನ್ ವರ್ಮಾ ಶಿಬಿರ ಉದ್ಘಾಟಿಸಲಿದ್ದಾರೆ.

ಕನ್ಯಾಡಿಯ ಸೇವಾಭಾರತಿ ಸಂಯೋಜನೆಯಲ್ಲಿ ನಡೆಯಲಿರುವ ರಕ್ತದಾನ ಶಿಬಿರದ ಆಯೋಜನೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಉಜಿರೆ ಬಂಟರ ಸಂಘ, ಬೆನಕ ಹೆಲ್ತ್ ಸೆಂಟರ್, ಉಜಿರೆ ಹವ್ಯಕ ವಲಯ, ಶ್ರೀ ಶಾರದಾ ಸೇವಾ ಟ್ರಸ್ಟ್, ಪ್ರಗತಿಮಹಿಳಾ ಮಂಡಲ, ಸಿಂಧು ಎಲೆಕ್ಟ್ರಿಕಲ್ಸ್, ಚಿರಂಜೀವಿ ಯುವಕ ಮಂಡಲ ಕಾನರ್ಪ, ಬೆಳ್ತಂಗಡಿ ಸಿ ಎ ಬ್ಯಾಂಕ್ ಮತ್ತು ಉಜಿರೆ ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಕೈಜೋಡಿಸಿವೆ.

ಸಾರ್ವಜನಿಕರು ರಕ್ತದಾನ ಮಾಡಿ ಇನ್ನೊಬ್ಬರ ಜೀವಕ್ಕೆ ನೆರವಾಗುವ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗಬೇಕೆಂದು ಸಂಘಟಕರು ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here