Site icon Suddi Belthangady

ಧರ್ಮಸ್ಥಳ ಬಸದಿಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೇ 21ರಂದು ತೋರಣ ಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.

ಮೇ 21ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯುತ್ತವೆ.

ಮೇ 22ರಂದು ಗುರುವಾರ ಅಪರಾಹ್ನ ಗಂಟೆ 2.30ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Exit mobile version