Site icon Suddi Belthangady

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಬೇಸಿಗೆ ಶಿಬಿರ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ.ಯದುಪತಿ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಹಾಸಿನಿ, ರೇಂಜರ್ ಲೀಡರ್ ರಕ್ಷಾ ಎ, ಗೈಡ್ಸ್ ಕ್ಯಾಪ್ಟನ್ ಗಳಾದ ಶೋಭಾ ನವೀನ್ ಮತ್ತು ಭವ್ಯ, ಕಬ್ ಮಾಸ್ಟರ್ ಹೇಮಲತಾ, ಪ್ಲಾಕ್ ಲೀಡರ್ ನಮಿತಾ ಉಪಸ್ಥಿತರಿದ್ದರು.

ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಸುಮಲತಾ ಧನ್ಯವಾದವಿತ್ತರು. ರೇಂಜರ್ ವಿದ್ಯಾರ್ಥಿನಿ ಸಿಂಚನ ಕಾರ್ಯಕ್ರಮ ನಿರೂಪಿಸಿದರು.

Exit mobile version