Site icon Suddi Belthangady

ಧರ್ಮಸ್ಥಳ: ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದಂತಹ ಡಾ.ಬಿ.ಯಶೋವರ್ಮ ಅವರಿಗೆ ಅವರ ಎರಡನೆಯ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಹ ಶಿಕ್ಷಕಿ ರಾಮಾರಾಜೇಶ್ ಹಾಗೂ ಆಶಾ ಡಾ.ಯಶೋವರ್ಮರವರ ಪುಸ್ತಕ ಪ್ರೀತಿ, ನಡೆ ನುಡಿ, ಆಗಾಧ ಜ್ಞಾನದ ಬಗ್ಗೆ ನುಡಿದರು.ತದನಂತರ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ರಕ್ತದೋತ್ತಡ ತಪಾಸಣೆಯನ್ನು ಪೋಷಕರಿಗೆ ಹಾಗೂ ಶಿಕ್ಷಕರಿಗೆ ಹಮ್ಮಿಕೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

Exit mobile version