Site icon Suddi Belthangady

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ಮಡಂತ್ಯಾರು: ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಇವರ ಸಾರಥ್ಯದಲ್ಲಿ ಭಜನಾ ತಂಡದ ಭಜಕ ವಿದ್ಯಾರ್ಥಿಗಳಿಗೆ 4ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 19ರಂದು ಬೆಳಗ್ಗೆ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದೇವಳದ ಪ್ರಧಾನ ಅರ್ಚಕ ಟಿ.ವಿ.ಶ್ರೀದರ ರಾವ್ ಪೇಜಾವರ ಮತ್ತು ದೇವಳದ ಮಾಜಿ ಅಡಳಿತ ಮೊಕ್ತೇಸರ ವಿಠಲ್ ಶೆಟ್ಟಿ ಮೂಡಾಯೂರು, ಭಜನಾ ತಂಡದ ಗೌರವಾದ್ಯಕ್ಷ ಯೋಗೀಶ್ ಹೆಗ್ಡೆ, ಗೌರವ ಸಲಹೆಗಾರ ಪ್ರಶಾಂತ್ ಎಮ್, ಅಧ್ಯಕ್ಷ ಪ್ರವೀಣ್ ಹೆಗ್ಡೆ, ಕಾರ್ಯದರ್ಶಿ ದೀರಜ್ ಹಾಗೂ ತಂಡದ ಮಾಜಿ ಅಧ್ಯಕ್ಷ ದಯಾನಂದ ಪೂಜಾರಿ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಭಜನೆ, ವಿದ್ಯೆ, ಸಂಸ್ಕ್ರತಿ – ಸಂಸ್ಕಾರಗಳ ಬಗ್ಗೆ ಭಜಕರಿಗೆ ಮಾಹಿತಿ ಮತ್ತು ಸಲಹೆ ನೀಡಿದರು.ಭಜನಾ ತಂಡದ ಸರ್ವಸದಸ್ಯರ ಉಪಸ್ಥಿತಿಯಲ್ಲಿ ತಂಡದಲ್ಲಿರುವ 45ಕ್ಕೂ ಅಧಿಕ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

Exit mobile version