Site icon Suddi Belthangady

ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಾರ್ಯಾಚರಣೆ: ಸಿ.ಎಂ., ಡಿಸಿಎಂಗೆ ಶುಭಕೋರುವ ಪ್ಲೆಕ್ಸ್ ತೆರವು

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ಹಾಕಲಾಗಿದ್ದ ಪ್ಲೆಕ್ಸ್ ತೆರವುಗೊಳಿಸಲಾಗಿದೆ.

ಅಕ್ರಮವಾಗಿ ಅಳವಡಿಸಲಾಗಿದೆ ಎಂಬ ಕಾರಣಕ್ಕಾಗಿ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಪ್ಲೆಕ್ಸ್ ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ತಾಲೂಕಿನ ವಿವಿದೆಡೆ ಇದೇ ರೀತಿಯ ಅನಧಿಕೃತ ಬ್ಯಾನರ್, ಪ್ಲೆಕ್ಸ್ ಅಳವಡಿಸಲಾಗಿದ್ದು ಸಂಬಂಧಿಸಿದವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ.

Exit mobile version