Site icon Suddi Belthangady

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ, ಹಿತೈಷಿಗಳು, ಅಭಿಮಾನಿಗಳಿಂದ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಮೇ 25ರಂದು ಬೆಳ್ತಂಗಡಿ ಜೈನ್ ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಸರಕಾರದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಿಂದ ನುಡಿನಮನ ಸಲ್ಲಿಸಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮ ಪ್ರಸಾದ್ ಅಜಿಲ, ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ದಾರಿಮಿ, ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾನಿಂಜ, ಬಂಗೇರರ ಅಳಿಯ ಧರ್ಮ ವಿಜೇತ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಬ್ಲಾಕ್ ಮಹಿಳಾ ನಗರ ಸಮಿತಿ ಅಧ್ಯಕ್ಷೆ ನಮಿತಾ ತೋಟತ್ತಾಡಿ, ಗ್ರಾಮೀಣ ಅಧ್ಯಕ್ಷೆ ವಂದನಾ ಭಂಡಾರಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.

ಕಾರ್ಯಕ್ರಮದ ಮೊದಲು ನಾಮದೇವ್ ರಾವ್ ಮುಂಡಾಜೆ, ಕಾರ್ಮಿಕ ಮುಖಂಡ ಬಿ. ಎಂ. ಭಟ್, ಸಾಹಿತಿ ಅಮೃತ ಶೆಟ್ಟಿ ಅತ್ರಾಡಿ, ಪತ್ರಕರ್ತ ಶಿಬಿ ಧರ್ಮಸ್ಥಳ, ಅಬ್ದುಲ್ ಲತೀಫ್ ಮಾಲಾಡಿ, ಸರ್ಕಾರಿ ಅಪರ ವಕೀಲ ಮನೋಹರ ಕುಮಾರ್ ಇಳಂತಿಲ ನುಡಿ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು, ಬಂಗೇರರ ಅಭಿಮಾನಿಗಳು, ಹಿತೈಷಿಗಳು, ಬಂಗೇರರ ಕುಟುಂಬ ವರ್ಗದವರು ಹಾಜರಿದ್ದರು.

Exit mobile version