Site icon Suddi Belthangady

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ,ತಪ್ಪಿದ ಅನಾಹುತ

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು.ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು ನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು.

ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಅಂದಾಜು 20 ಅಡಿ ಕೆಳಗೆ ಪ್ರತಾಪಕ್ಕೆ ಬೀಳುವುದು ಕೂದಲೇಲೆಯ ಅಂತರದಲ್ಲಿ ತಪ್ಪಿತು. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು.

ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ.ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

Exit mobile version