Site icon Suddi Belthangady

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ತನುಶ್ರೀ ಇವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.

ಈ‌ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮ, ಮುಖಂಡರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಕೊರಗಪ್ಪ, ಧರ್ಣಪ್ಪ, ಬಿಜೆಪಿ ಬೂತ್ ಅಧ್ಯಕ್ಷ ಸುಧೀರ್ ಅಂಕೋಣಿಮಾರ್ ಉಪಸ್ಥಿತರಿದ್ದರು.

Exit mobile version