Site icon Suddi Belthangady

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ: ಶಶಿರಾಜ್ ಶೆಟ್ಟಿ ಪೊಲೀಸ್ ಕಸ್ಟಡಿ ಮೇ 29 ಮಧ್ಯಾಹ್ನದವರೆಗೆ ವಿಸ್ತರಣೆ

ಬೆಳ್ತಂಗಡಿ: ಅಕ್ರಮ‌ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬೆಳ್ತಂಗಡಿ ಪೊಲೀಸರಿಂದ ಬಂಧಿತರಾಗಿರುವ ಶಶಿರಾಜ್ ಶೆಟ್ಟಿಯವರ ಪೊಲೀಸ್ ಕಸ್ಟಡಿ ಅವಧಿಯನ್ನು ಮೇ 29ರ ಮಧ್ಯಾಹ್ನದವರೆಗೆ ವಿಸ್ತರಿಸಲಾಗಿದೆ.

ಬಂಧನಕ್ಕೊಳಗಾಗಿದ್ದ ವೇಳೆ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿ ಅವರನ್ನು ಮೇ 27ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.‌

ಈ ವೇಳೆ ನ್ಯಾಯಾಧೀಶ ಸಂದೇಶ್ ಅವರು ಮೇ 29ರಂದು ಮಧ್ಯಾಹ್ನ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದರು.

ಸರಕಾರದ ಪರವಾಗಿ ಎಪಿಪಿಗಳಾದ ದಿವ್ಯರಾಜ್ ಹೆಗ್ಡೆ ಪುತ್ತೂರು ಮತ್ತು ಆಶಿತಾ ಉಪಸ್ಥಿತರಿದ್ದರು.‌

Exit mobile version