Site icon Suddi Belthangady

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನಿರ್ಮಲರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀ ಅವರು ಮಂಡಿಸಿದರು.

ಒಕ್ಕೂಟದ ಗತ ಸಭೆಯ ವರದಿಯನ್ನು ವಿನೋದರವರು ಮಂಡಿಸಿದರು.ವಲಯ ಮೇಲ್ವಿಚಾರಕಿ ಉಷಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿ, ಆಂತರಿಕ ಲೆಕ್ಕಪರಿಶೋಧಕರಾದ ಶಿವರಾಂ ರವರು ಲೆಕ್ಕಪರಿಶೋಧನೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಪುಷ್ಪಾ ಮತ್ತು ಸುನಿತಾರವರು ಉಪಸ್ಥಿತರಿದ್ದರು.

ಜಯಶ್ರೀ ಕಾರ್ಯಕ್ರಮ ಸ್ವಾಗತಿಸಿ, ಧನ್ಯವಾದವಿತ್ತರು.

Exit mobile version