Site icon Suddi Belthangady

ಕೊಯ್ಯೂರು: ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಚಿಕಿತ್ಸಾ ನೆರವು

ಕೊಯ್ಯೂರು: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ಕೊಡಂಗೆ ನಿವಾಸಿ ಯಶೋಧರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಚಿಕಿತ್ಸಾ ಸಹಾಯಾರ್ಥವಾಗಿ ರೂ.20,000/-ದ ಚೆಕ್ಕನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ನಿರ್ದೇಶಕ ಆನಂದ ಗೌಡ ಉಜಿರೆ ಇವರ ಮೂಲಕ ಫಲಾನುಭವಿಯ ಪತ್ನಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಕಾರ್ಯದರ್ಶಿ ಹಾಗೂ ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಸೀತಾರಾಮ್ ಸೌರಭ ಬೆಳಾಲು, ವಾಣಿ ಸೌಹಾರ್ದ- ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಸುರೇಶ್ ಕೌಡಂಗೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಮೀನಾಕ್ಷಿ ಮಹಾಬಲ ಗೌಡ ಉಪಸ್ಥಿತರಿದ್ದರು.

Exit mobile version