ಕುಕ್ಕೇಡಿ: ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

0

ಕುಕ್ಕೇಡಿ: ವಿದ್ಯೆಯಿಂದ ಸ್ವತಂತ್ರ ರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಂತೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಪ್ರತಿ ವರ್ಷವೂ ಸಂಘದ ಸದಸ್ಯರ ಮಕ್ಕಳಿಗೆ ಕೊಡುವ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಈ ವರ್ಷವೂ ಸಂಘದ ಗೌರವಧ್ಯಕ್ಷ ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಇವರ ಮನೆಯಲ್ಲಿ ನಡೆಯಿತು.

ಸಂಘದ ಗೌರವ ಅಧ್ಯಕ್ಷ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದ ಮಹಾ ಪೋಷಕರೂ ಆದ ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಈ ಒಂದು ಪುಸ್ತಕ ವಿತರಣೆ ಕಾರ್ಯಕ್ರಮ ಮಾಡುತ್ತಿದ್ದು ಮಕ್ಕಳು ಇದರ ಸದುಪಯೋಗ ಪಡೆದು ಮುಂದೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆದು ಕೀರ್ತಿವಂತರಾಗಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿ ಎಂದರು.

ಮುಖ್ಯ ಅತಿಥಿ ವೇಣೂರು ಗ್ರಾಮ ಪಂಚಾಯತ್ ಸದಸ್ಯ ಲೋಕಯ್ಯ ಪೂಜಾರಿ ಕಂಗಿತ್ತಿಳು ಮಾತನಾಡಿ ಕೋಟಿ ಚೆನ್ನಯ್ಯ ಸೇವಾ ಸಂಘ ಮಾಡುತ್ತಿರುವ ಸಮಾಜಮುಖಿ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದರು.

ಕುಕ್ಕೆಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಮಾತನಾಡಿ ಅಲ್ಪಾವಧಿಯಲ್ಲಿ ಅತಿ ಹೆಚ್ಚು ಸಮಾಜಮುಖಿ ಕೆಲಸ ಕಾರ್ಯಗಳಿಂದ ಸಮಾಜಕ್ಕೆ ಮಾದರಿಯಾಗಿರುವ ಈ ಸಂಘ ಇನಷ್ಟು ಎತ್ತರಕ್ಕೆ ಬೆಳೆಯಲಿ ಎಂದರು.

ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್ ಅಂಕರ್ಜಾಲು ಮಾತನಾಡಿ ಸಂಘಟನೆ ನಾರಾಯಣ ಗುರುಗಳ ತತ್ವ ಸಿದ್ದಾಂತದಂತೆ ಮುನ್ನಡೆಯುತ್ತಿದ್ದು ಈ ವರೆಗೆ ಸಮಾಜಕ್ಕೆ ಪೂರಕವಾಗಿ ಕೆಲಸಕಾರ್ಯಗಳನ್ನು ಮಾಡಿರುತ್ತೇವೆ ವಿದ್ಯೆಗೆ ಪ್ರೋತ್ಸಾಹ ನೀಡಬೇಕು ಸಂಘಟನೆಯನ್ನು ಗಟ್ಟಿಗೊಳಿಸಿ ಮುಂದಿನ ದಿನಗಳಲ್ಲಿ ಹತ್ತು ಹಲವಾರು ಯೋಚನೆ ಮತ್ತು ಯೋಜನೆ ಮೂಲಕ ಇನಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವ ಉದ್ದೇಶ ನಮ್ಮದಾಗಿದೆ ಈ ಎಲ್ಲಾ ಚಟುವಟಿಕೆಗಳಿಗೆ ಸಂಘದ ಪ್ರತಿಯೊಬ್ಬ ಸದಸ್ಯರು ನನೊಂದಿಗೆ ಕೈ ಜೋಡಿಸಿ ಸಂಘಟನೆಯನ್ನು ಬಲಪಡಿಸೋಣ ಎಂದರು.

ವೇದಿಕೆಯಲ್ಲಿ ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಕೋಶಾಧಿಕಾರಿ ದಿವಾಕರ ಪೂಜಾರಿ ಉಪಸ್ಥಿತರಿದ್ದರು.

ಯಶಲತಾ ಅಮ್ಮಾಜಿ ಪೂಜಾರಿ ಮಕ್ಕಳಿಗೆ ಮನೋರಂಜನೆಗಾಗಿ ಹಲವಾರುಚುಟುಕು ಸ್ಪರ್ಧೆಗಳನ್ನು ನಡೆಸಿ ಕೊಟ್ಟರು ಸಂಘದ ಪದಾಧಿಕಾರಿಗಳು ಸದಸ್ಯರು ಸಹಕಾರ ನೀಡಿದರು.

ಅಮೂಲ್ಯ, ಅನನ್ಯ ಇವರ ಪ್ರಾರ್ಥಿಸಿ, ನವೀನ್ ಜಿ ಬುಲೆಕ್ಕರ ನಿರೂಪಿಸಿ, ಸಂಘದ ಕಾರ್ಯದರ್ಶಿ ರವಿ ಉಳ್ತುರು ವಂದಿಸಿದರು.

LEAVE A REPLY

Please enter your comment!
Please enter your name here