ಕೊಕ್ಕಡ ವಲಯದ ಹಳ್ಳಿಂಗೇರಿಯಲ್ಲಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

0

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಸೌತಡ್ಕದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷ ಅಬ್ದುಲ್ ರಜಾಕ್ ರವರ ಅಧ್ಯಕ್ಷತೆಯಲ್ಲಿ ಹಳ್ಳಿoಗೇರಿ ಸಮುದಾಯ ಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಪ್ರಗತಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಲಕ್ಷ್ಮಿಯವರು ಮಂಡಿಸಿದರು.

ಒಕ್ಕೂಟದ ಗತ ಸಭೆಯ ವರದಿಯನ್ನು ಅಶ್ವಿನಿರವರು ಮಂಡಿಸಿದರು.

ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಕೃಷಿಯನ್ನು ಆಧುನಿಕವಾಗಿ ಅನುಷ್ಠಾನಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ವಲಯ ಮೇಲ್ವಿಚಾರಕ ಭಾಗೀರಥಿಯವರು ಹಾಗು ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಕುಸುಮ ಎಸ್ ರವರು ಉಪಸ್ಥಿತರಿದ್ದರು.

ಮಾಲತಿ ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here