Site icon Suddi Belthangady

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ- “ಶೌರ್ಯ” ವಿಪತ್ತು ತಂಡ ಆಪತ್ಕಾರದಲ್ಲಿ ಜೀವ ಉಳಿಸುವ ದೇವರಿದ್ದಂತೆ: ಸೀತಾರಾಮ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆಯನ್ನು ಸೀತಾರಾಮ ಬೆಳ್ತಂಗಡಿಯವರು ಉದ್ಘಾಟಿಸಿ ನಿರಂತರವಾಗಿ ಶ್ರಮವಹಿಸಿ ಸಮಾಜಕ್ಕೆ ತನ್ನದೇ ಆದ ಸೇವೆಯನ್ನು “ಶೌರ್ಯ” ವಿಪತ್ತು ಘಟಕದ ಮೂಲಕವಾಗಿ ನೀಡುತ್ತಿರುವ ಎಲ್ಲ ಸ್ವಯಂ ಸೇವಕರಿಗೆ ಶುಭ ಹಾರೈಸಿದರು.

ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ.ಹೆಗ್ಗಡೆಯವರ ಮಾರ್ಗದರ್ಶನದಂತೆ ಕರ್ನಾಟಕ ರಾಜ್ಯದ 90 ತಾಲೂಕಿನಲ್ಲಿ 10300 ಸ್ವಯಂಸೇವಕರ ಬಲಿಷ್ಠ ತಂಡ ಇಡೀ ಕರ್ನಾಟಕ ರಾಜ್ಯದ್ಯಂತ ಪ್ರಾಕೃತಿಕ ವಿಕೋಪ ಹಾಗೂ ಇನ್ನಿತರ ತುರ್ತು ಸ್ಪಂದನೆಯ ಸಂದರ್ಭದಲ್ಲಿ ಸ್ಪಂದನೆಯನ್ನು ನೀಡಿ ಇಡೀ ರಾಜ್ಯದ ಮೆಚ್ಚುಗೆಯನ್ನು ಗಳಿಸಿದ್ದು, ಇದರ ಪ್ರಥಮ ಪ್ರಯೋಗಶಾಲೆಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಾರಂಭಗೊಂಡ ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಈ ಕಾರ್ಯಕ್ರಮವು ಕರ್ನಾಟಕ ಸರಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೆಚ್ಚುಗೆಯನ್ನು ಕೂಡ ಗಳಿಸಿದೆ.

ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮತ್ತು ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿಯ,ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿಯ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆಯಲ್ಲಿ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ರವರು ಈ ಕಾರ್ಯಕ್ರಮವು ಪರಮಪೂಜ್ಯ ಕವಂದರ ಅತ್ಯಂತ ಪ್ರೀತಿಯ ಕಾರ್ಯಕ್ರಮವಾಗಿದ್ದು ಪ್ರತಿ ಗ್ರಾಮದಲ್ಲಿಯೂ ಈ ತಂಡವನ್ನು ಬಲಿಷ್ಠವಾಗಿ ಕಟ್ಟಿ ಇನ್ನು ಮಳೆಗಾಲದ ಸಂದರ್ಭದಲ್ಲಿ ಯಾವುದೇ ಕ್ಲಿಷ್ಟಕರ ಸಮಸ್ಯೆಗಳು ತನ್ನ ಊರಿನಲ್ಲಿ ಪಕ್ಕದ ಊರಿನಲ್ಲಿ ತಾಲೂಕಿನಲ್ಲಿ ಪಕ್ಕದ ತಾಲೂಕಿನಲ್ಲಿ ಸಂಭವಿಸಿದಾಗ ತಕ್ಷಣವಾಗಿ ರಾತ್ರಿ ಹಗಲಿನ್ನದೇ ತಾವು ಸೇವೆಯನ್ನು ನೀಡಲು ಬದ್ದರಿರಬೇಕು ಇದಕ್ಕೆ ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಂಡು ಎಲ್ಲಾ ಘಟಕದ ಸ್ವಯಂಸೇವಕರು ನಿರಂತರವಾಗಿ ಈ ಸೇವೆಗೆ ಕಟ್ಟಿಬದ್ಧರಾಗಿರಬೇಕೆಂದು ತಿಳಿಸಿದರು.

“ಶೌರ್ಯ” ವಿಪತ್ತು ಘಟಕದ ರಾಜ್ಯ ಯೋಜನಾಧಿಕಾರಿಗಳಾದ ಜೈವಂತ ಪಟಗಾರರವರು ಪ್ರತಿ ಘಟಕವಾರು ಇರುವಂತಹ ಸ್ವಯಂಸೇವಕರು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರತಿ ಘಟಕವಾರು ವಿಮರ್ಷಿಸಿ ಸಲಹೆ ಸೂಚನೆಯನ್ನು ನೀಡಿದರು.

ಸಭೆಯಲ್ಲಿ ಬೆಳ್ತಂಗಡಿಯ ಮಾಸ್ಟರ್ ಸ್ನೇಕ್ ಪ್ರಕಾಶ್, ಬೆಳ್ತಂಗಡಿಯ ಕ್ಯಾಪ್ಟನ್ ಸಂತೋಷ್, ಗುರುವಾಯನಕೆರೆಯ ಕ್ಯಾಪ್ಟನ್ ಸತೀಶ್, ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ಗುರುವಾಯನಕೆರೆ, ತಾಲೂಕಿನ ಯೋಜನಾಧಿಕಾರಿ ದಯಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕಿನ ಎಲ್ಲ ಘಟಕದ ಘಟಕ ಪ್ರತಿನಿಧಿಗಳು, ಘಟಕದ ಸಂಯೋಜಕರು ಹಾಗೂ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.ಮೇಲ್ವಿಚಾರಕರಾದ ವಸಂತ, ಹರೀಶ ಕೃಷಿ ಅಧಿಕಾರಿ ರಾಮ್ ಕುಮಾರ್ ರವರು ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ, ನಿರೂಪಿಸಿದರು.

Exit mobile version