Site icon Suddi Belthangady

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕ ಹೃದಯಾಘಾತದಿಂದ ಸಾವು

ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ಕೊಡಿಯಡ್ಕ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಗೌಡ (70ವ) ರವರು (ಇಂದು)ಮೇ 29ರ ಮಧ್ಯಾಹ್ನ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಇವರು ಮೇ 29ರ ಬೆಳಗ್ಗೆಯಿಂದ ತಮ್ಮ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು.

ಮಧ್ಯಾಹ್ನ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತೆನ್ನಲಾಗಿದೆ.

ಕೂಡಲೇ ಅವರು ತನ್ನ ಪತ್ನಿ ಸುಶೀಲರಲ್ಲಿ ಎದೆನೋವು ಆಗುತ್ತಿರುವ ಬಗ್ಗೆ ತಿಳಿಸಿದ್ದರು.

ನಂತರ ಪಕ್ಕದ ಮನೆಯವರಿಗೆ ವಿಷಯ ತಿಳಿಸಿ ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ, ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆನ್ನಲಾಗಿದೆ.

Exit mobile version