Site icon Suddi Belthangady

ಶ್ರೀ ಗುರು ರಾಘವೇಂದ್ರ ಮಠಕ್ಕೆ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ಗುರುರಾಘವೇಂದ್ರ ಮಠಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ತಾಯಿಯೊಂದಿಗೆ ಮೇ 30ರಂದು ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗ್ಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ ಹೇರಾಜೆ, ಸುರೇಶ್ ಶೆಟ್ಟಿ ಕ್ಷೇತ್ರದ ಮುಖ್ಯ ಪುರೋಹಿತ ರಾಘವೇಂದ್ರ ಬಾಂಗೀನಾಯ ಉಪಸ್ಥಿತರಿದ್ದರು.

Exit mobile version