Site icon Suddi Belthangady

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮಡಂತ್ಯಾರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ವತಿಯಿಂದ ಇ-ಹುಂಡಿ ಸಮರ್ಪಣೆ

ಬಳ್ಳಮಂಜ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಇ-ಹುಂಡಿ ಸಮರ್ಪಿಸಲಾಯಿತು.

ಯೂನಿಯನ್ ಬ್ಯಾಂಕ್ ನ ಮಹತ್ವಾಕಾಂಕ್ಷಿ ಯೋಜನೆಯ ಅಂಗವಾಗಿ ಎಲ್ಲಾ ಧಾರ್ಮಿಕ ಮಂದಿರಗಳಿಗೆ ಈ ಸವಲತ್ತು ನೀಡಿ ಭಕ್ತಾದಿಗಳಿಗೆ ದೇಣಿಗೆ ನೀಡಲು ಸುಲಭವಾಗಲು ಕ್ಯೂಆರ್ ಕೋಡ್ ಸೌಲಭ್ಯವನ್ನು ನೀಡಲಾಗುತ್ತಿದೆ.

ದೇವಸ್ಥಾನದ ಪರವಾಗಿ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ|ಹರ್ಷ ಸಂಪಿಗೆತ್ತಾಯ ಇ-ಹುಂಡಿಯನ್ನು ಬ್ಯಾಂಕಿನ ಮುಖ್ಯ ಪ್ರಬಂಧಕ ವೆಂಕಟೇಶ್ ಇವರಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಅಶೋಕ್ ಕೋಟ್ಯಾನ್ ಬ್ಯಾಂಕಿನ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version