Site icon Suddi Belthangady

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ

ಬೆಳ್ತಂಗಡಿ: ಶ್ರೀ ಧರ್ಮ ಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.

ಎಸ್ ಎಸ್ ಎಲ್ ಸಿ ಯಲ್ಲಿ ರಾಜಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆಯನ್ನು ನೀಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರ ಕೇಸರಿ ಉಪಸ್ಥಿತರಿದ್ದು, ಮಕ್ಕಳಿಗೆ ಶುಭ ಹಾರೈಸಿದರು.

ಸಿ.ಆರ್.ಪಿ ವಾರಿಜ ಮುಖ್ಯ ಅಭ್ಯಂಗತರಾಗಿ ಆಗಮಿಸಿ, ಚಿನ್ಮಯ್ ಜಿ.ಕೆ ಯಂತಹ ವಿದ್ಯಾರ್ಥಿಗಳು ಇನ್ನಷ್ಟು ಈ ಸಂಸ್ಥೆಯಿಂದ ಹೊರಬರಲಿ ಎಂದು ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಉಪಸ್ಥಿತರಿದ್ದರು.

ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.ಸಹ ಶಿಕ್ಷಕ ಮುರುಳಿ ಪಿ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಆಯುಷ್ ಎನ್ ಪ್ರೋತ್ಸಾಹದಾಯಕ ಮಾತುಗಳಾನ್ನಾಡಿದರು.

Exit mobile version