Site icon Suddi Belthangady

ದ.ಕ.ಜಿಲ್ಲಾ ಪ.ಪೂ. ಗಣಕ ವಿಜ್ಞಾನ ಉಪನ್ಯಾಸಕರ ತರಬೇತಿ ಕಾರ್ಯಗಾರ

ಬೆಳ್ತಂಗಡಿ: 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಿಗೆ ಒಂದು ದಿನದ ತರಬೇತಿ ಕಾರ್ಯಗಾರ ಮೇ 30ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಕೆನರ ಪದವಿ ಕಾಲೇಜುನಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಮಂಗಳೂರು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ, ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲತಾಮಹೇಶ್ವರಿ, ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಹಾಗೂ ಸಂಪನ್ಮೂಲ ವ್ಯಕ್ತಿ ಗಿರೀಶ್ ಕೆ. ಉಪಸ್ಥಿತರಿದ್ದರು.

ಪ್ರದೀಪ್ ಕೆ.ವೈ. ಸ್ವಾಗತಿಸಿ, ಸಂಘದ ಕೋಶಾಧಿಕಾರಿ ಸುಮಾ ಶೆಟ್ಟಿ ವಂದಿಸಿದರು.

Exit mobile version