ಬೆಳ್ತಂಗಡಿ: ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

0

ಬೆಳ್ತಂಗಡಿ: ಯುವ ಸಮುದಾಯ ತಂಬಾಕು ಸೇವನೆ ಯಂತಹ ದುಶ್ಚಟಗಳಿಗೆ ಬಲಿಯಾಗಬಾರದು. ಬೆಳ್ತಂಗಡಿ ತಾಲೂಕು ಜನ ಜಾಗೃತಿ ವೇದಿಕೆ ಯ ನಿಕಟ ಪೂರ್ವ ಅಧ್ಯಕ್ಷ ಪಿ.ಕೆ ರಾಜು ಪೂಜಾರಿ ಅಭಿಮತ
ಶಾಲಾ ವಿದ್ಯಾರ್ಥಿಗಳ ದೆಸೆಯಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟು ಕೊಳ್ಳಬೇಕೂ ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗಬಾರದು ಎಂದು ಬೆಳ್ತಂಗಡಿ ತಾಲೂಕಿನ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಪಿ.ಕೆ ಪೂಜಾರಿಯವರು ಕರೆ ನೀಡಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ, ಸರಕಾರಿ ಪ್ರೌಡ ಶಾಲೆ ನಾರಾವಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ನಾರಾವಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾರಾವಿ ಸರಕಾರಿ ಪ್ರೌಡ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದುಶ್ಚಟ ದುರಭ್ಯಾಸಗಳನ್ನ ಮನ ಪರಿವರ್ತನೆಯ ಮೂಲಕ ಹೋಗಲಾಡಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಜನ ಜಾಗೃತಿ ವೇದಿಕೆ ಯನ್ನ ಕಟ್ಟಿದ್ದಾರೆ
ಇದರಿಂದಾಗಿ ಸಾಕಷ್ಟು ಸಮಾಜ ಪರಿವರ್ತನೆಯ ಕಾರ್ಯಕ್ರಮಗಳ ಮೂಲಕ ಸಾವಿರಾರು ಕುಟುಂಬಗಳಲ್ಲಿ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಆಗಿದೆ ಎಂದರು.

ಬೀಡಿ ಸೇವನೆಯ ಮೂಲಕ ಟಿಬಿ ಕಾಯಿಲೆ ಬರುತ್ತದೆ ಬೀಡಿ ಸೇವನೆಯ ಸದಸ್ಯರ ಸಂಖ್ಯೆಯ ಪ್ರಮಾಣ ಕಡಿಮೆಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ವಿಶ್ಲೇಷಿಸಿದರು. ಈ ಬೆಳವಣಿಗೆಗಳು ತಿಳವಳಿಕೆ ಹಾಗು ಜಾಗೃತಿಯ ಮೂಲಕ ಸಾದ್ಯ ಆಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿದ ತಾಲೂಕ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಕಿಶೋರ್ ಹೆಗ್ಡೆ ಮಾತನಾಡುತ್ತ ಹಿಂದಿನ ಕಾಲದಲ್ಲಿ ಮಕ್ಕಳಿಗಾಗಿ ತಂದೆ ತಾಯಿ ಆಸ್ತಿ ಮಾಡುತ್ತಿದ್ದರು ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುತ್ತಿದ್ದಾರೆ ಹಾಗಾಗೀ ಮಕ್ಕಳು ತಮ್ಮ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕೇ ಹೊರತು ದುರ ಬ್ಯಾಸಗಳಿಗೆ ಒಳಗಾಗಬಾರದು ಇಂಥಹ ಸಂಕಲ್ಪವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಮಾಡಬೇಕು ಎಂದು ವಿವರಿಸಿದರು.

ಪೂಜ್ಯರ ಮಾರ್ಗದರ್ಶನದಲ್ಲಿ ಜನ ಜಾಗೃತಿ ವೇದಿಕೆ ಸಮಾಜ ಕಂಟಕ ರಾಗಿದ್ದವರನ್ನ ಸಮಾಜ ಚಿಂತಕರಾಗಿ ಮಾಡುವ ಕೆಲಸವನ್ನ ಹಾಗು ವಿದ್ಯಾರ್ಥಿಗಳನ್ನು ಎಚ್ಚರಿಸುವ ಕೆಲಸವನ್ನೂ ಜನ ಜಾಗೃತಿ ವೇದಿಕೆ ಮಾಡುತ್ತಿದೆ ಎಂದು ವಿವರಿಸಿದರು.

ವೇದಿಕೆಯಲ್ಲಿ ಮುಕ್ಯೋಪಾದ್ಯಾಯಿನಿ ಸುಶೀಲಾ, ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ, ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ನಿಯೋಜಿತ ಕಾರ್ಯದರ್ಶಿ ಕಿರಣ್ ಶೆಟ್ಟಿ, ಜನ ಜಾಗೃತಿ ವೇದಿಕೆಯ ನಾರಾವಿ ವಲಯದ ಅದ್ಯಕ್ಷ ನಿತ್ಯಾನಂದ ನಾವರ, ಸದಸ್ಯ ವಸಂತ ಗುಣಶೀಲ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರಾ, ಗ್ರಾಮ ಸಮಿತಿ ಅಧ್ಯಕ್ಷ ರಾಮ ಶೆಟ್ಟಿ ಜಗದೀಶ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷ ಸುರೇಶ್ ದಾಸ್ ಉಪಸ್ಥಿತರಿದ್ದರು.

ಮೇಲ್ವಿಚಾರಕ ದಮಯಂತಿ, ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ರೇಷ್ಮಾ, ಮಮತಾ ಶೆಟ್ಟಿ ಹಾಜರಿದ್ದರು.ನಾರಾವಿ ಪಟ್ಟಣದಲ್ಲಿ ಗುಂಪಿನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.

LEAVE A REPLY

Please enter your comment!
Please enter your name here