Site icon Suddi Belthangady

ವೇಣೂರು: ಮಾಜಿ ಶಾಸಕ ಕೆ.ವಸಂತ ಬಂಗೇರಿಗೆ ನುಡಿ ನಮನ ಕಾರ್ಯಕ್ರಮ

ವೇಣೂರು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವೇಣೂರು ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರಿಗೆ ನುಡಿ ನಮನ ಕಾರ್ಯಕ್ರಮ ವೇಣೂರು ಲಯನ್ಸ್ ಕ್ಲಬ್ ನಲ್ಲಿ ನಡೆಯಿತು.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಜಯರಾಮ ಶೆಟ್ಟಿ ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು.

ವೇಣೂರು ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಬಂಗೇರರು ತನ್ನ ಜೀವನದ ಉದ್ದಕ್ಕೂ ಬಡವರ ಏಳಿಗೆಯನ್ನು ಬಯಸಿದವರು ಎಂದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಗುಣಪ್ರಸಾದ್ ಕಾರಂದೂರು, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ ಪೂಜಾರಿ, ನಿವೃತ್ತ ಮುಖ್ಯೋಪಾಧ್ಯಾಯ ಪ್ರಭಾಕರ ಹೆಗ್ಡೆ ಹಟ್ಟಾಜೆ ಗುತ್ತು, ಹಿರಿಯರಾದ ಮಹಮ್ಮದ್ ಸಾಹೇಬ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರಸಾದ್ ಎಂ ಕೆ, ಬೆಳ್ತಂಗಡಿ ಆರಾಧನಾ ಸಮಿತಿ ಸದಸ್ಯ ಬಾಲಕೃಷ್ಣ ಭಟ್, ಗ್ರಾ.ಪಂ.ಸದಸ್ಯರಾದ ಅನೂಪ್ ಜೆ.ಪಾಯಸ್, ಹರೀಶ್ ಪಿ.ಎಸ್ , ಸುನೀಲ್ ಬಜಿರೆ, ಸುರೇಶ್ ಅಂಡಿಂಜೆ, ಪ್ರಮುಖರಾದ ವಿಶ್ವನಾಥ ಪೂಜಾರಿ ದಡ್ಡಲ್ ಪಲ್ಕೆ, ವಿಕ್ಟರ್, ರಮೇಶ್ ಪೂಜಾರಿ ಪಡ್ಡಾಯಿಮಜಲು, ದಯಾನಂದ ದೇವಾಡಿಗ, ಸತೀಶ್ ಉಜಿರ್ದಡ್ಡ, ಸತೀಶ್ ಕಜಿಪಟ್ಟ, ನವೀನ್, ಬಂಗೇರರ ಅಭಿಮಾನಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ.ಗು.ನಾ.ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ನಿತೀಶ್ ಹೆಚ್.ಕೋಟ್ಯಾನ್ ಸ್ವಾಗತಿಸಿ, ವೇಣೂರು ಶ್ರೀ.ಗು.ನಾ.ಸ್ವಾ. ಸೇ.ಸಂಘದ ಕಾರ್ಯದರ್ಶಿ ರಾಕೇಶ್ ಕುಮಾರ್ ನಿರೂಪಿಸಿ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ವಂದಿಸಿದರು.

Exit mobile version