Site icon Suddi Belthangady

ಧರ್ಮಸ್ಥಳ ಸಹಕಾರ ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು.

ಸಂಘದ ಅಧ್ಯಕ್ಷ ಪೀತಮ್ ಡಿ., ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು ಪದ್ಮಾವತಿ ದಂಪತಿಯನ್ನು ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ತಾಯಿ ದೇವಕಿ, ಸಂಘದ ಸದಸ್ಯರು ಹಾಜರಿದ್ದರು.

Exit mobile version