Site icon Suddi Belthangady

ರೆಖ್ಯದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ: ದನ, ನಾಯಿ ಸಾವು

ಬೆಳ್ತಂಗಡಿ: ಭಾನುವಾರ ಜೂನ್ 02ರ ಸಾಯಂಕಾಲ ಭಾರಿ ಸಿಡಿಲು ಸಹಿತ ಮಳೆಯಾಗಿದ್ದು, ರೆಖ್ಯದಲ್ಲಿ ಸಿಡಿಲಾಘಾತಕ್ಕೆ ದನ ಹಾಗೂ ನಾಯಿ ಸಾವಿಗೀಡಾಗಿದೆ.

ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿವೆ.

ಮನೆಯ ಮೇಲ್ಛಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ. ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ‌ ಮೃತಪಟ್ಟಿವೆ.

ಮನೆಯವರು ಅಪಾಯದಿಂದ‌ ಪಾರಾಗಿದ್ದಾರೆ.

Exit mobile version