Site icon Suddi Belthangady

ಉಜಿರೆ: ಮಾಚಾರಿನಲ್ಲಿ ಹಳೆಯ ದ್ವೇಷಕ್ಕೆ ಹೊಡೆದಾಟ- ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ನಿವಾಸಿ ಅಶ್ವಥ್ (21 ವ)ರವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 2ರಂದು ಸಂಜೆ ಉಜಿರೆ ಗ್ರಾಮದ ಮೇಲಿನ ಮಚಾರು ಎಂಬಲ್ಲಿ ಅಶ್ವಥ್‌ರವರು ಇರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿ ಬಂದಿದ್ದಾರೆ. ಈ ಪೈಕಿ ಕರುಣಾಕರ ಗೌಡ ಎಂಬಾತ ಅಶ್ವಥ್‌ರವರ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. ನಂ 64/2024ರಂತೆ ಪ್ರಕರಣ ದಾಖಲಾಗಿದೆ.

Exit mobile version