Site icon Suddi Belthangady

ಧ.ಗ್ರಾ.ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಕನ್ನಾಜೆ ವಿಶ್ವಕರ್ಮ ಸಭಾ ಭವನದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಲಯದ ಜನಜಾಗೃತಿ ಅಧ್ಯಕ್ಷ ಪುರುಷೋತ್ತಮ ವಯಿಸಿದ್ದರು.

ಜನಜಾಗೃತಿ ಶಿಬಿರಾಧಿಕಾರಿ ದಿವಾಕರ ಪೂಜಾರಿ ಇವರು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಚಿಕ್ಕ ಮಕ್ಕಳಿಂದಲೇ ಈ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮನೆಯವರು ಮಾಡಬೇಕು,ಹೀಗಿದ್ದರೆ ಮಾತ್ರ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಪ್ರಗತಿ ಬಂಧು ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸೀತಾರಾಮ್
ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್.
ಭಜನಾ ಪರಿಷತ್ ವಲಯ ಅಧ್ಯಕ್ಷರಾದ ಗಣೇಶ್ ಲಾಯಿಲ.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ m k.
ನಿಕಟಪೂರ್ವ ಅಧ್ಯಕ್ಷರಾದ ಸತೀಶ್, ನೂತನ ಒಕ್ಕೂಟದ ಅಧ್ಯಕ್ಷರು ಯಶೋದಾ,
ವಲಯ ಮೇಲ್ವಿಚಾರಕರಾದ ಹರೀಶ್ ಗೌಡ,
ಸೇವಾಪ್ರತಿನಿಧಿ ಜ್ಯೋತಿ,ಗುಣವತಿ. ಒಕ್ಕೂಟದ ನಿಕಟಪೂರ್ವ ಹಾಗೂ ನೂತನ ಪದಾಧಿಕಾರಿಗಳು,ಸಂಘದ ಸದಸ್ಯರು ಉಪಸ್ಥಿತರಿದ್ದು ತರಬೇತಿಯನ್ನು ಪಡೆದುಕೊಂಡಿದ್ದರು.

Exit mobile version