Site icon Suddi Belthangady

ಬಂಟರ ಯಾನೆ ನಾಡವರ ಸಂಘದ ಮಹಾಸಭೆ

ಬೆಳ್ತೆಂಗಡಿ: ಬೆಳ್ತಂಗಡಿ ತಾಲೂಕು ಬಂಟರಯಾನೆ ನಾಡವರ ಸಂಘ ಇದರ 2023-24 ಸಾಲಿನ ವಾರ್ಷಿಕ ಮಹಾಸಭೆಯು ಗುರುವಾಯನಕೆರೆಯ ಬಂಟರ ಭವನದಲ್ಲಿ ಮೇ 25ರಂದು ಬಂಟರ ಸಂಘದ ಅಧ್ಯಕ್ಷತೆಯನ್ನು ಜರುಗಿತು.

ಬಂಟರ ಸಂಘದ ಮಹಾಸಭೆಯೊಂದಿಗೆ ಬಂಟರ ಯುವ ವಿಭಾಗ ಮತ್ತು ಮಹಿಳಾ ವಿಭಾಗದ ವರದಿ ಮತ್ತು ಲೆಕ್ಕ ಪತ್ರ ಮಂಡನೆಯಾಯಿತು. ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಇವರು ಮಾತನಾಡಿ ಎಲ್ಲರೂ ಸಹಕಾರ ನೀಡಿದ್ದರಿಂದ ಈ ಸಂಘವು ಬೆಳೆಯಲು ಸಾದ್ಯವಾಯಿತು.

ಮುಂದೆ ಕೂಡ ಬಂಟರ ಸಂಘದ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕಾಗಿ ವಿನಂತಿಸಿಕೊಂಡರು.ವೇದಿಕೆಯಲ್ಲಿ ಉಪಾಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕೋಶಾಧಿಕಾರಿ ಆನಂದ ಶೆಟ್ಟಿ, ಜತೆ ಕಾರ್ಯದರ್ಶಿ ಸುರೇಶ ಶೆಟ್ಟಿ, ಯುವ ವಿಭಾಗ ಅಧ್ಯಕ್ಷ ಸುಜಯ್ ಶೆಟ್ಟಿ, ಮಹಿಳಾ ವಿಭಾಗ ಅಧ್ಯಕ್ಷೆ ಶೋಭಾ ವಿ.ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸಂಜೀವ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Exit mobile version