Site icon Suddi Belthangady

ಬಿಜೆಪಿಯ ಭದ್ರಕೋಟೆಯಲ್ಲಿ ಅರಳಿದ ಕಮಲ- ಬೆಳ್ತಂಗಡಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಬೆಳ್ತಂಗಡಿ: ಭಾರಿ ಕುತೂಹಲ ಕೆರಳಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಆರಂಭದಿಂದಲೇ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮುನ್ನಡೆಯಲ್ಲಿದ್ದು, 1,45,426 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. 7,47,002 ಮತಗಳನ್ನು ಪಡೆದು ದ.ಕ. ಬಿಜೆಪಿಯ ಭದ್ರಕೋಟೆ ಎಂದು ಮತ್ತೆ ಸಾಭೀತಾಗಿದೆ.

ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿವಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯ ಘೋಷ ಕೂಗಿ ಗೆಲುವನ್ನು ಸಂಭ್ರಮಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪಕ್ಷದ ಪ್ರಮುಖರಾದ ಕೊರಗಪ್ಪ ನಾಯ್ಕ್, ವಸಂತಿ ಮಚ್ಚಿನ, ರಾಜೇಶ್ ಪೆರ್ಬುಂಡ ಸಹಿತ ಕಾರ್ಯಕತರು ಉಪಸ್ಥಿತರಿದ್ಧರು.

Exit mobile version