ಹತ್ತನೇ ತರಗತಿಯ ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅಕ್ಷಯರಿಗೆ ಅಭಿನಂದನಾ ಕಾರ್ಯಕ್ರಮ

0

ಕೊಯ್ಯೂರು‌: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಾಲ್ ಇದರ ವತಿಯಿಂದ 2023- 24ನೇ ಸಾಲಿನಲ್ಲಿ ನಡೆದ ಹತ್ತನೇ ತರಗತಿಯ ಸಿ ಬಿ ಎಸ್ ಇ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನವನ್ನು ತಂದುಕೊಟ್ಟ ಕೋರಿಯಾರು ಶೇಖರ್ ಗೌಡ ಮತ್ತು ಚಿತ್ರಶ್ರೀ ದಂಪತಿಯ ಮಗ ಅಕ್ಷಯ್ ರವರಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಿತು.

ಭಜನಾ ಮಂಡಳಿಯ ಪರವಾಗಿ ಪಿಡಬ್ಲ್ಯೂಡಿ ಗುತ್ತಿಗೆದಾರ ಗುಣಕರ ರೈ ಯವರು ಅಭಿನಂದಿಸಿದರು.ಈ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ.ಚಂದ್ರಶೇಖರ ಸಾಲಿಯಾನ್ ಕೊಯ್ಯೂರು, ಭಜನಾ ಮಂಡಳಿಯ ಅಧ್ಯಕ್ಷ ರೋಹಿತ್ ಗೌಡ, ಉಪಾಧ್ಯಕ್ಷ ಸುಂದರ ಗೌಡ, ಕಾರ್ಯದರ್ಶಿ ಓಬಯ್ಯ ನಾಯ್ಕ, ಜೊತೆ ಕಾರ್ಯದರ್ಶಿಗಳಾದ ಅಶೋಕ್ ಜಿತೇಶ್, ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ಬೊಟ್ಟು, ನಿಕಟ ಪೂರ್ವ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತು ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here