ಶಿಶಿಲ: ರೈತರ ಸದಸ್ಯತ್ವ ನೋಂದಾವಣೆ ಮತ್ತು ಮಾಹಿತಿ ಶಿಬಿರ

0

ಶಿಶಿಲ: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪಾದಕರ ಕಂಪನಿಯ ವತಿಯಿಂದ ಮತ್ತು ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಜೂ.5ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷ ಸುಧೀನ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕೆದಿಲಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಜಯಾನಂದ್‌, ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್ ಮತ್ತು ಕಾರ್ಯನಿರ್ವಾಹನಣಾಧಿಕಾರಿ ದಿನೇಶ್, ಕೊಕ್ಕಡ ವಲಯ ಮೇಲ್ವಿಚಾರಕಿ ವೀಣಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ Icrp ಗಳು ಹಾಜರಿದ್ದರು ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

ಕೃಷಿ ಸಖಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.

Mbk ಶಾರದಾ ಸ್ವಾಗತಿಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here