Site icon Suddi Belthangady

ನಡ: ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ಆಚರಿಸಲಾಯಿತು.

ಸುರ್ಯ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಡಾ.ಸತೀಶ್ಚಂದ್ರ ಹಾಗೂ ವಿದ್ಯಾ.ಪಿ.ಡಿ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ಇಲಾಖೆ ) ಇವರು ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅರಣ್ಯಕರಣದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅರಣ್ಯಧಿಕಾರಿ ಅಶೋಕ್, ಇಲಾಖೆ ಸಿಬ್ಬಂದಿ ಶೇಖರ ಗೌಡ, ನಡ ಪಂಚಾಯತ್ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಪ್ರಸಾದ್, ಸುಂದರ ನಾಯ್ಕ, ಪದ್ಮನಾಭ ಗೌಡ, ಯೋಗೀಶ್ ಪೂಜಾರಿ ಹಾಜರಿದ್ದರು. ಮಾವು, ಹೆಬ್ಬಲಸು, ಸಂಪಿಗೆ, ನೇರಳೆ, ಶ್ರೀಗಂಧ, ಸೊರಗೆ , ಹೊಳೆ ದಾಸವಾಳ ಇತ್ಯಾದಿ ವಿವಿಧ ಬಗೆಯ ನೂರು ಗಿಡಗಳನ್ನು ಸುರ್ಯ ದೇವಸ್ಥಾನದ ವಠಾರದಲ್ಲಿ ನೆಡಲಾಯಿತು.

Exit mobile version